ವಕ್ಫ್| ದ.ಕ.ಜಿಲ್ಲಾ ಮುಸ್ಲಿಂ ಲೀಗ್ ಮನವಿ

Update: 2025-02-19 22:45 IST

ಮಂಗಳೂರು : ಭಾರತದ ಮುಸಲ್ಮಾನರ ಅಭಿವೃದ್ಧಿಗಾಗಿ ತನ್ನ ಭೂಮಿಯನ್ನು ದಾನ ಮಾಡಿದ ವಕ್ಫ್ ಆಸ್ತಿಯನ್ನು ಸಂರಕ್ಷಿಸಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾಧಿಕಾರಿಯ ಮೂಲಕ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸರಕಾರಕ್ಕೆ ಮನವಿ ಸಲ್ಲಿಸಿದೆ.

ಲೀಗ್ ಜಿಲ್ಲಾಧ್ಯಕ್ಷ ಸಿ. ಅಬ್ದುಲ್ ರಹ್ಮಾನ್, ಜಿಲ್ಲಾ ಕೋಶಾಧಿಕಾರಿ ರಿಯಾಝ್ ಹರೇಕಳ, ಜಿಲ್ಲಾ ಉಪಾಧ್ಯಕ್ಷ ಸೈಯದ್ ಬಂಗೇರ ಕಟ್ಟೆ ಬೆಳ್ತಂಗಡಿ, ಹಾಜಿ ಆದಂ ಎಚ್., ಮುಹಮ್ಮದ್ ಇಸ್ಮಾಯಿಲ್, ಮುಖಂಡರಾದ ಬಿ.ಎ.ಮುಹಮ್ಮದ್ ಕರಾಮತ್ ಕುಡ್ಪಾಡಿ, ಕೆ.ಸಿ. ಖಾದರ್ ಕಾವೂರು, ಎಚ್.ಕೆ. ಕುಂಞಿ ದೇರಳಕಟ್ಟೆ, ಅಬೂಬಕರ್ ಸಿದ್ದೀಕ್, ಶೌಕತ್ ಆಲಿ ಜೋಕಟ್ಟೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News