ಯುನಿವೆಫ್ ನಿಂದ ಹಜ್ ತರಬೇತಿ ಶಿಬಿರ
Update: 2025-04-16 17:44 IST

ಮಂಗಳೂರು: ಯುನಿವೆಫ್ ಕರ್ನಾಟಕ ಇದರ ದ.ಕ. ಜಿಲ್ಲಾ ಘಟಕದ ವತಿಯಿಂದ ಹಜ್ ಪ್ರಾಯೋಗಿಕ ತರಬೇತಿ ಶಿಬಿರ ಕಂಕನಾಡಿಯ ಜಮೀಯತುಲ್ ಫಲಾಹ್ ಹಾಲ್ ನಲ್ಲಿ ಜರಗಿತು.
ಈ ಕಾರ್ಯಕ್ರಮದಲ್ಲಿ ಯುನಿವೆಫ್ ಕರ್ನಾಟಕ ಅಧ್ಯಕ್ಷ ಮತ್ತು ಉಳ್ಳಾಲ ನಿಮ್ರಾ ಮಸೀದಿಯ ಖತೀಬ್ ರಫೀಉದ್ದೀನ್ ಕುದ್ರೋಳಿಯವರು ಹಜ್ ಮತ್ತು ಉಮ್ರಾಃ ವಿಧಿವಿಧಾನಗಳನ್ನು ಪ್ರಾಯೋಗಿಕವಾಗಿ ಸವಿಸ್ತಾರವಾಗಿ ಹಾಜಿಗಳಿಗೆ ವಿವರಿಸಿದರು.
ಕಾರ್ಯದರ್ಶಿ ಯು. ಕೆ. ಖಾಲಿದ್ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೌಫಲ್ ಹಸನ್ ಕಿರ್ಅತ್ ಪಠಿಸಿದರು.
ಕಾರ್ಯಕ್ರಮದ ಬಳಿಕ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಹಜ್ ಕರ್ಮದ ಬಗ್ಗೆ ಹಾಜಿಗಳ ಸಮಸ್ಯೆಗಳಿಗೆ ಅಂತರಾಷ್ಟ್ರೀಯ ವಿದ್ವಾಂಸರ ಅಭಿಪ್ರಾಯಗಳನ್ನು ಉಲ್ಲೇಖಿಸಿ ಪರಿಹಾರ ಸೂಚಿಸಿದರು. ಈ ಸಂದರ್ಭದಲ್ಲಿ ಹಜ್ ಕರ್ಮದ ವಿವಿಧ ಆಯಾಮಗಳ ಛಾಯಾಚಿತ್ರ ಪ್ರದರ್ಶನವನ್ನು ಕೂಡಾ ಏರ್ಪಡಿಸಲಾಗಿತ್ತು. ಜಿಲ್ಲೆಯ ವಿವಿಧ ಕಡೆಗಳಿಂದ ಹಾಜಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.