ಬೆಳ್ತಂಗಡಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ ಎಸ್ ಡಿಪಿಐಯಿಂದ ಕ್ಯಾಂಡಲ್ ಮಾರ್ಚ್

Update: 2025-04-24 09:40 IST
ಬೆಳ್ತಂಗಡಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ ಎಸ್ ಡಿಪಿಐಯಿಂದ ಕ್ಯಾಂಡಲ್ ಮಾರ್ಚ್
  • whatsapp icon

ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯನ್ನು ಮತ್ತು ಕೇಂದ್ರ ಸರಕಾರದ ಭದ್ರತೆ, ಗುಪ್ತಚರ ವೈಫಲ್ಯವನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬುಧವಾರ ರಾತ್ರಿ ಕ್ಯಾಂಡಲ್ ಮಾರ್ಚ್ ಪ್ರತಿಭಟನೆ ಬೆಳ್ತಂಗಡಿ ಮೂರು ಮಾರ್ಗದ ಬಳಿ ನಡೆಯಿತು.

 

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ, ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಈ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.

 

ದೇಶದ ಜನರಿಗೆ ಕೇಂದ್ರ ಭದ್ರತೆ ಒದಗಿಸಬೇಕು, ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಸಮಿತಿಯ ಸದಸ್ಯರಾದ ಮುಸ್ತಫ ಜಿ. ಕೆರೆ, ಸಹಲ್ ನಿರ್ಸಾಲ್, ಅಶ್ರಫ್ ಬದ್ಯಾರು, ಪಕ್ಷದ ಪದಾಧಿಕಾರಿಗಳು, ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News