ಬೆಳ್ಳಾರೆಯಲ್ಲಿ ಎನ್ಐಎ ದಾಳಿ; ಮನೆ ಪರಿಶೀಲನೆ

Update: 2024-03-05 08:00 GMT

ಸುಳ್ಯ: ಎನ್ಐಎ ಅಧಿಕಾರಿಗಳ ತಂಡವೊಂದು ಮುಂಜಾನೆ ಮನೆಯೊಂದರ ಮೇಲೆ ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ನಡೆದಿದೆ.

ಎನ್ಐಎ ಅಧಿಕಾರಿಗಳ ತಂಡವು ಇಲ್ಲಿನ ಕೇರಳ ಮೂಲದವರ ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿ ಮಾಹಿತಿ ಕಲೆ ಹಾಕಿದೆ.  ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದೆ. ಅಧಿಕಾರಿಗಳನ್ನು ಸಂಪರ್ಕಿಸಿದಾಗ ಮಾಹಿತಿ ನೀಡಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News