ಪಿಯುಸಿ ಪರೀಕ್ಷೆ ಹಿನ್ನೆಲೆ: ನಿಷೇಧಾಜ್ಞೆ

Update: 2023-08-19 14:56 GMT

ಮಂಗಳೂರು, ಆ.19: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂರು ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿರುವ ಹಿನ್ನಲೆಯಲ್ಲಿ ಸೆ.144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಕಾನೂನು ಸುವ್ಯವಸ್ಥಾ ವಿಭಾಗದ ಡಿಸಿಪಿ ಅಂಶುಕುಮಾರ್ ಆದೇಶಿಸಿದ್ದಾರೆ.

ಆ.21ರಿಂದ ಸೆ.2ರವರೆಗೆ ನಗರದ ಕೋಡಿಯಾಲ್‌ಬೈಲ್‌ನ ಬೆಸೆಂಟ್ ಪದವಿಪೂರ್ವ ಕಾಲೇಜು, ಸಂತ ಆಗ್ನೆಸ್ ಪದವಿ ಪೂರ್ವ ಕಾಲೇಜು, ಸುರತ್ಕಲ್‌ನ ಗೋವಿಂದದಾಸ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

ಹಾಗಾಗಿ ಈ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವನ್ನು ಘೋಷಿಸಿ ಕಲಂ 144 ಸಿಆರ್‌ಪಿಸಿ ಕಾಯ್ದೆಯ ಅನ್ವಯ ನಿಷೇಧಾಜ್ಞೆಯನ್ನು ವಿಧಿಸಿ ಆದೇಶಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News