ಪುಂಜಾಲಕಟ್ಟೆ | ಲಾರಿ ಪಲ್ಟಿ: ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Update: 2024-07-19 06:14 GMT

ಬಂಟ್ವಾಳ, ಜು.19: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಹೆಸರು, ಮಾಹಿತಿ ಲಭ್ಯವಾಗಿಲ್ಲ.

ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಶಾಮಿಯಾನದ ಸಾಮಗ್ರಿಗಳನ್ನು ಹೇರಿಕೊಂಡು ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಶ್ರೀ ರಾಮಾಂಜನೇಯ ಭಜನಾ ಮಂದಿರದ ಬಳಿಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.

ಪೂಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News