ಪುತ್ತೂರು: ಬೇಕರಿಯಲ್ಲಿ ಬೆಂಕಿ; ಹಾನಿ

Update: 2024-03-02 05:43 GMT

ಪುತ್ತೂರು, ಮಾ.2: ನಗರದ ಕೊಂಬೆಟ್ಟು ಎಂಬಲ್ಲಿರುವ ಬೇಕರಿ ಅಂಗಡಿಯೊಂದರಲ್ಲಿ ಕಾಣಿಸಿಕೊಂಡಿದ್ದು, ಅಪಾರ ಹಾನಿಯಾದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಕೊಂಬೆಟ್ಟುವಿನಲ್ಲಿರುವ ಪ್ರಭು ಸ್ವೀಟ್ಸ್ ಎಂಬ ಅಂಗಡಿಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಾದ್ಯಂತ ವ್ಯಾಪಿಸಿತ್ತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿರುವುದಾಗಿ ಶಂಕಿಸಲಾಗಿದೆ.

ಅಂಗಡಿಯಲ್ಲಿದ್ದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.

ಮಾಹಿತಿ ಅರಿತು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News