ಪುತ್ತೂರು: ಕೃಷಿ ಉತ್ಪನ್ನಗಳನ್ನು ಪೂರೈಸದೆ ವಂಚನೆ; ಪ್ರಕರಣ ದಾಖಲು

Update: 2024-06-01 09:31 GMT

ಪುತ್ತೂರು: ಆನ್ಲೈನ್ ಮೂಲಕ ಕೃಷಿಗೆ ಬೇಕಾದ  ದ್ರವ ಉತ್ಪನ್ನಗಳನ್ನು ಪೂರೈಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ವ್ಯಕ್ತಿಯೋರ್ವರು ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಪ್ರಕರಣದ ಪಿರ್ಯಾದಿದಾರರಾದ ನಗರದ ನರಿಮೊಗರು ನಿವಾಸಿ ಗಣೇಶ್ ಪ್ರಭು (40) ಎಂಬವರು ಈ ಕುರಿತು ದೂರು ನೀಡಿದ್ದಾರೆ.

ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ, ಅಗ್ರೋ ಉತ್ಪನ್ನಗಳನ್ನು ಕೃಷಿಕರಿಗೆ ಮಾರಾಟ ಮಾಡುತ್ತಿದ್ದು, ಯುನಿಟಿ ಪಾಲಿ ಬ್ಯಾರೆಲ್ಸ್ ಪ್ರೈವೇಟ್ ಲಿಮಿಟೆಡ್ ಅಶೋಕ ನಗರ, ಶಿವಾಜಿ ನಗರ, ಪುಣೆ, ಮಹಾರಾಷ್ಟ್ರ ಎಂಬ ಹೆಸರಿನಿಂದ ಗಣೇಶ್ ಪ್ರಭು ಅವರನ್ನು ಅಪರಿಚಿತ ಆರೋಪಿಗಳು ಸಂಪರ್ಕಿಸಿದ್ದರ ಎನ್ನಲಾಗಿದೆ.

ಆನ್ ಲೈನ್ ಮುಖಾಂತರ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಿ ನಂಬಿಸಿ ಗಣೇಶ್ ಅವರಿಂದ ಮೇ 8-10ರ ಅವಧಿಯಲ್ಲಿ ಕರೆ ಮಾಡಿ, 9152464514 ಎಂಬ ನಣಬರ್‌ ಗೆ ರೂ.1,30,500 ಹಣವನ್ನು ಮೂರು ಹಂತಗಳಲ್ಲಿ ಫೋನ್ ಪೇ ಮೂಲಕ ಹಾಕಿಸಿಕೊಂಡಿದ್ದರು. ಆದರೆ ಹಣ ಪಡೆದುಕೊಂಡವರು ಈವರೆಗೆ ಉತ್ಪನ್ನಗಳನ್ನು ಗಳನ್ನು ಕಳುಹಿಸಿಕೊಟ್ಟಿರುವುದಿಲ್ಲ ಎಂದು ಅವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಗಣೇಶ್ ಪ್ರಭು ಅವರು ನೀಡಿದ ದೂರಿನನ್ವಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News