ಪುತ್ತೂರು: ಟೆಂಪೋ ಚಾಲಕ ಆತ್ಮಹತ್ಯೆ

Update: 2024-01-25 08:31 GMT

ಪುತ್ತೂರು: ಟೆಂಪೋ ಚಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕುರಿಂಜ ಪೊನ್ನಲಡ್ಕ ಎಂಬಲ್ಲಿ ನಡೆದಿದೆ.

ಮೃತ ಚಾಲಕನನ್ನು ಯಾದವ ಯಾನೆ ರವೀಂದ್ರ (45) ಎಂದು ಗುರುತಿಸಲಾಗಿದೆ. ಮಿನಿ ಟೆಂಪೋ ಚಾಲಕರಾಗಿದ್ದ ಅವರು ಮನೆಯಿಂದ ಸ್ವಲ್ಪ ದೂರದಲ್ಲಿ ತನ್ನ ಟೆಂಪೋ ನಿಲ್ಲಿಸಿ ಪಕ್ಕದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News