ವಿಟ್ಲ: ರಸ್ತೆ ಅಪಘಾತ; ಮೂವರಿಗೆ ಗಂಭೀರ ಗಾಯ

Update: 2023-11-19 15:27 GMT

ವಿಟ್ಲ: ಕಂಬಳಬೆಟ್ಟುವಿನಲ್ಲಿ ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಢಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಉರಿಮಜಲು ಸಮೀಪ ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಕೇರಳ ಕೊಲ್ಲಂ ಮೂಲದ ದಿನೇಶ್, ಅಡ್ಯನಡ್ಕ ಮೂಲಕದ ಸತೀಶ್, ವಸಂತ್ ಗಾಯಗೊಂಡವರಾಗಿದ್ದಾರೆ. ಕಂಬಳಬೆಟ್ಟು ದರ್ಗಾ ಬಳಿಯಲ್ಲಿ ಘಟನೆ ನಡೆದಿದ್ದು, ಸ್ಥಳೀಯರು ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News