ಪುತ್ತೂರು | ಸ್ಕೂಟರ್ ಲಾರಿ ಢಿಕ್ಕಿ: ವಿಕಲಚೇತನ ವ್ಯಕ್ತಿ ಮೃತ್ಯು

Update: 2024-07-24 05:30 GMT

ಪುತ್ತೂರು: ವಿಕಲಚೇತನ ವ್ಯಕ್ತಿಯೋರ್ವರು ಚಲಾಯಿಸುತ್ತಿದ್ದ ಸ್ಕೂಟರ್ ಗೆ ಲಾರಿಯೊಂದು ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಜಲ್ಪಡ್ಪು ಎಂಬಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಬಂಟ್ವಾಳ ತಾಲೂಕಿನ ಮಿತ್ತೂರು ಏಮಾಜೆ ಶಿವರಾಮ ನಾಯ್ಕ (50) ಎಂಬವರು ಮೃತಪಟ್ಟ ವ್ಯಕ್ತಿ.

ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಯು ಶಿವರಾಮ ಅವರು ಚಲಾಯಿಸುತ್ತಿದ್ದ ಮೂರು ಚಕ್ರದ ಸ್ಕೂಟರ್ ಗೆ ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುತ್ತೂರು ಸಂಚಾರ ಠಾಣೆಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News