ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ

Update: 2023-09-10 14:26 GMT

ಮಂಗಳೂರು, ಸೆ.10:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಮಂಗಳೂರು ವಲಯದ ಶಕ್ತಿನಗರ ಕಾರ್ಯಕ್ಷೇತ್ರದಲ್ಲಿ ಶ್ರೀ ಗಣೇಶ್ ಜ್ಞಾನ ವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರವು ನಡೆಯಿತು.

ಕಾರ್ಪೊರೇಟರ್ ವನಿತಾ ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟದ ಉಪಾಧ್ಯಕ್ಷ ಪ್ರಾಣೇಶ್ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ರೇಖಾಲತಾ ಭಾಗವಹಿಸಿದ್ದರು.

ಈ ಸಂದರ್ಭ ಮೇಲ್ವಿಚಾರಕಿ ಶೋಭಾ ಐ, ಸಮನ್ವಯಧಿಕಾರಿ ಆಶಾ ಚಂದ್ರ, ಅಂಜಲಿ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News