ಉಜಿರೆ : ಹಿರಿಯ ಕಾಂಗ್ರೆಸ್ ಮುಖಂಡ ಇ. ಸುಂದರ ಗೌಡ ನಿಧನ

Update: 2024-10-06 08:27 GMT

ಬೆಳ್ತಂಗಡಿ:  ಉಜಿರೆ ಸಿಎ ಬ್ಯಾಂಕಿನ ಅಧ್ಯಕ್ಷ, ಹಿರಿಯ ಸಹಕಾರಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಉಜಿರೆ ಇಚ್ಚಿಲ ನಿವಾಸಿ ಇ. ಸುಂದರ ಗೌಡ (74) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ.6ರಂದು ನಿಧನ ಹೊಂದಿದರು. 

ಉಜಿರೆ ರಬ್ಬರ್ ಸೊಸೈಟಿ ಮಂಗಳೂರಿನ ಮಾಸ್ ಲಿಮಿಟೆಡ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದು, ಒಂದು ಬಾರಿ ಜಿಲ್ಲಾ ಪಂಚಾಯತಿ ಸದಸ್ಯರಾಗಿಯು ಆಯ್ಕೆಯಾಗಿದ್ದರು. ಉದ್ಯಮಿಯಾಗಿದ್ದ ಇವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದರು ಹಲವು ಸಂಘ, ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಕಾಂಗ್ರೆಸ್‌ ಪಕ್ಷದ ಹಲವು ಜವಾಬ್ದಾರಿ ಗಳನ್ನು ನಿರ್ವಹಿಸಿದ್ದರು.

ಮೃತರು ಪತ್ನಿ,ಪುತ್ರ ಹಾಗೂ ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News