ಸೆ.22: ಕುದ್ರೋಳಿಯಲ್ಲಿ ರಕ್ತದಾನ ಶಿಬಿರ

Update: 2024-09-20 15:53 GMT

ಮಂಗಳೂರು : ನಗರದ ಕುದ್ರೋಳಿಯಲ್ಲಿರುವ ಮುಸ್ಲಿಂ ಐಕ್ಯತಾ ವೇದಿಕೆಯು ಇಂಡಿಯನ್ ರೆಡ್‌ಕ್ರಾಸ್ ಮತ್ತು ಕೆಎಂಸಿ ಆಸ್ಪತ್ರೆಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಸೆ.22ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2ರವರೆಗೆ ಕುದ್ರೋಳಿ ಯಲ್ಲಿರುವ ಸರಕಾರಿ ಉರ್ದು ಶಾಲೆಯ ಆವರಣದಲ್ಲಿ ಆಯೋಜಿಸಿದೆ.

ಮುಖ್ಯ ಅತಿಥಿಗಳಾಗಿ ಸ್ಪೀಕರ್ ಯು.ಟಿ. ಖಾದರ್, ಶಾಸಕ ಐವನ್ ಡಿಸೋಜ, ಕಾಂಗ್ರೆಸ್ ಮುಖಂಡರಾದ ಪದ್ಮರಾಜ್, ಇನಾಯತ್ ಅಲಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News