ಸೆ.8: ರಾಜ್ಯಪಾಲರ ದ.ಕ. ಜಿಲ್ಲಾ ಪ್ರವಾಸ

Update: 2023-09-07 17:02 GMT

ಮಂಗಳೂರು,ಸೆ.7: ಕರ್ನಾಟಕದ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಸೆ.8ರಂದು ದ.ಕ.ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಪೂ.11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 11:25ಕ್ಕೆ ಸರ್ಕ್ಯೂಟ್ ಹೌಸ್‌ಗೆ ತೆರಳುವರು.

ಮಧ್ಯಾಹ್ನ 12ಕ್ಕೆ ನಗರದ ಟಿ.ಎಂ.ಎ. ಪೈ ಕನ್‌ವೆನ್‌ಶನ್ ಹಾಲ್‌ನಲ್ಲಿ ದಿ ಫಿಸಿಯೋಥೆರಪಿ ಕಾನ್ಫರೆನ್ಸ್ ಮ್ಯಾಂಗಳೂರ್ ಫಿಸಿಯೋಕಾನ್ 2023 ಕಾರ್ಯಕ್ರಮ ಉದ್ಘಾಟಿಸುವರು. ಮಧ್ಯಾಹ್ನ 1ಕ್ಕೆ ನಗರದ ಹೋಟೆಲ್ ತಾಜ್ ವಂತಾದಲ್ಲಿ ವಾಸ್ತವ್ಯ ಮಾಡುವರು.1:30ಕ್ಕೆ ಖಾಸಗಿ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಆಡಳಿತದ ಅಧಿಕಾರಿಗಳೊಂದಿಗೆ ಸಂವಾದ ನಡೆಸುವರು. ಸಂಜೆ 5:25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News