ಸೆ.20: ಮಂಗಳೂರಿಗೆ ತುಷಾರ್ ಗಾಂಧಿ ಭೇಟಿ

Update: 2024-09-16 13:47 GMT

ಮಂಗಳೂರು, ಸೆ.16: ಮಹಾತ್ಮ ಗಾಂಧೀಜಿಯ ಮರಿಮಗ ಮತ್ತು ಖ್ಯಾತ ಸಾಮಾಜಿಕ ಚಿಂತಕ ತುಷಾರ್ ಗಾಂಧಿ ಸೆ.20ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 10:30ಕ್ಕೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ತುಷಾರ್ ಗಾಂಧಿ ʼಇಂದಿನ ಯುವಜನತೆಗೆ ಗಾಂಧಿ ವಿಚಾರಧಾರೆಯ ಪ್ರಸ್ತುತತೆʼ ಎಂಬ ವಿಷಯದಲ್ಲಿ ಉಪನ್ಯಾಸ ನೀಡುವರು.

ರಾಜ್ಯವಿಧಾನ ಸಭೆಯ ಅಧ್ಯಕ್ಷ ಯು.ಟಿ. ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ. ಕೃಷ್ಣ ದಿಕ್ಸೂಚಿ ಭಾಷಣ ಮಾಡುವರು. ಕುಂಬ್ರ ಜತ್ತಪ್ಪರೈ ಪ್ರತಿಷ್ಠಾನದ ಸಂಸ್ಥಾಪಕ ಪ್ರಮೋದ್ ಕುಮಾರ್ ರೈ ರಚಿಸಿರುವ ಱಆನ್ ದ ಟ್ರೈಲ್ ಆಫ್ ಗಾಂಧೀಸ್ ಪುಟ್‌ಸ್ಟೆಪ್ಸ್ ಹಾಗೂ ಱಬಿಪೋರ್ ಐ ರಿಟರ್ನ್ ಟು ದ ಸೊಲ್‌ೞ ಕೃತಿಯನ್ನು ನಿಟ್ಟೆ ವಿ.ವಿ. ಸಹ ಕುಲಾಧಿಪತಿ ಡಾ. ಶಾಂತರಾಮ ಶೆಟ್ಟಿ ಬಿಡುಗಡೆಗೊಳಿಸುವರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕುಂಬ್ರ ಜತ್ತಪ್ಪರೈ ಪ್ರತಿಷ್ಠಾನದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರತಿಷ್ಠಾನದ ಪ್ರಮೋದ್ ಕುಮಾರ್ ರೈ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News