ಎಪಿಎಂಸಿ ಮಜೀದ್ ಮಸೀದಿ ಸಮಿತಿ ಅಧ್ಯಕ್ಷರಾಗಿ ಸಿರಾಜುದ್ದೀನ್ ಸಾಲ್ಮರ ಆಯ್ಕೆ

Update: 2023-09-10 13:32 GMT

ಸಿರಾಜುದ್ದೀನ್

ಪುತ್ತೂರು: ಇಲ್ಲಿನ ಎಪಿಎಂಸಿ ಮಜೀದ್ ಮಸ್ಜಿದ್ ಸಮಿತಿ ಸಾಲ್ಮರ ಇದರ ನೂತನ ಅಧ್ಯಕ್ಷರಾಗಿ ಸಿರಾಜುದ್ದೀನ್ ಸಾಲ್ಮರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕಬೀರ್ ಸಾಲ್ಮರ ಆಯ್ಕೆಯಾಗಿದ್ದಾರೆ.

ಶನಿವಾರ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಹಾಜಿ ಯೂ ಅಬ್ದುಲ್ಲಾ, ಉಪಾಧ್ಯಕ್ಷರಾಗಿ ಅಶ್ರಫ್ ಗಾರ್ಬಲ್, ಕೋಶಾಧಿಕಾರಿಯಾಗಿ ಅಬ್ದುಲ್ ರಹೀಮ್ ರಾಹಿಲ್, ಜೊತೆ ಕಾರ್ಯದರ್ಶಿಯಾಗಿ ಬದ್ರುದ್ದೀನ್ ಸಾಲ್ಮರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಉಮ್ಮರ್ ಫೈಜಿ ಸಾಲ್ಮರ, ಹಂಝಾ ಕೆ ಎಂ, ಬಶೀರ್ ಸಾಲ್ಮರ ಆಯ್ಕೆಯಾಗಿದ್ದಾರೆ.

ಅನ್ಸಾರುದ್ದೀನ್ ಜಮಾತ್ ಕಮಿಟಿ ಅಧ್ಯಕ್ಷ ಎಲ್ ಟಿ ಅಬ್ದುಲ್ ರಜಾಕ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಯಾಕುಬ್ ಖಾನ್ ಸಹಕರಿಸಿದರು. ನೌಫಲ್ ಸಾಲ್ಮರ ಸ್ವಾಗತಿಸಿ, ವರದಿ ಮಂಡಿಸಿದರು. 

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News