ಎಸ್ಕೆಎಸ್ಸೆಸ್ಸೆಫ್ ದ.ಕ. ಜಿಲ್ಲಾ ಲೀಡರ್ಸ್ ಕ್ಯಾಂಪ್

Update: 2023-09-01 15:12 GMT

ಮಂಗಳೂರು, ಸೆ.1: ಎಸ್ಕೆಎಸೆಸ್ಸೆಫ್ ದ.ಕ. ಜಿಲ್ಲೆ ವೆಸ್ಟ್ ಸಮಿತಿಯ ವತಿಯಿಂದ ಜಿಲ್ಲಾ ಮಟ್ಟದ ಲೀಡರ್ ಶಿಪ್ ಕ್ಯಾಂಪ್ ಕೈಕಂಬದ ಖಾಸಗಿ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷ ಸೈಯದ್ ಅಮೀರ್ ತಂಳ್‌ರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ಸಮಸ್ತ ಜಿಲ್ಲಾ ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷ ಎಂಎಚ್ ಮೊಹಿದಿನ್ ಹಾಜಿ ಧ್ವಜಾರೋಹಣಗೈದರು. ಕೈಕಂಬ ವಲಯ ಎಸ್ಕೆಎಸ್ಸೆಸ್ಸೆಫ್ ಅಧ್ಯಕ್ಷ ಜಮಾಲುದ್ದೀನ್ ದಾರಿಮಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಸತ್ತಾರ್ ಪಂದಲ್ಲೂರ್ ಮುಖ್ಯಭಾಷಣಗೈದರು. ‘ಸಂಘಟನೆ ಅಲ್ಲಾಹನ ತೃಪ್ತಿಗೆ’ ಎಂಬ ಬಗ್ಗೆ ಸ್ವದಖತುಲ್ಲಾಹ್ ಫೈಝಿ, ‘ನಾಯಕತ್ವ’ದ ಬಗ್ಗೆ ರಶೀದ್ ಮಾಸ್ಟರ್ ತರಗತಿ ನಡೆಸಿಕೊಟ್ಟರು. ಎಸ್ಕೆಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಸರಿ ಸಮಾರೋಪ ಭಾಷಣ ಮಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬೂಸ್ವಾಲಿಹ್ ಫೈಝಿ ಸ್ವಾಗತಿಸಿದರು. ಜಿಲ್ಲಾ ವರ್ಕಿಂಗ್ ಕಾರ್ಯದರ್ಶಿ ಬದ್ರುದ್ದೀನ್ ಕುಕ್ಕಾಜೆ ವಂದಿಸಿದರು. ಜಿಲ್ಲಾ ಉಪಾಧ್ಯಕ್ಷ ಫಾರೂಕ್ ದಾರಿಮಿ ಮತ್ತು ಎಸ್ಕೆಎಸ್ಸೆಸ್ಸೆಫ್ ಕೈಕಂಬ ವಲಯ ಪ್ರಧಾನ ಕಾರ್ಯದರ್ಶಿ ಆರೀಫ್ ಬಡಕಬೈಲ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News