ಸುಳ್ಯ: ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು

Update: 2023-11-06 07:35 GMT

ಸುಳ್ಯ: ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ವರದಿಯಾಗಿದೆ.

ಪಂಜ ಸಮೀಪದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಮತ್ತು ಹೊನ್ನಮ್ಮ ದಂಪತಿಯ ಪುತ್ರ ಬಿಪಿನ್ ಚಿದ್ಗಲ್ಲು ಮೃತ ಯುವಕ.

ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಬಿಪಿನ್, ಶನಿವಾರ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದ. ರವಿವಾರ ಬೀಚ್‌ಗೆ ಹೋಗಿದ್ದ ವೇಳೆ ಸಮುದ್ರ ಪಾಲಾಗಿದ್ದಾನೆ. ಮೃತದೇಹ ಪತ್ತೆಯಾಗಿದ್ದು, ಊರಿಗೆ ತರುವ ಪ್ರಕ್ರಿಯೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News