ಸುಳ್ಯ: ಬೈಕ್ ಕಳ್ಳತನ ಪ್ರಕರಣದ ಆರೋಪಿ ಸೆರೆ

Update: 2023-09-17 14:50 GMT

ಸುಳ್ಯ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಎಂದು ಗುರುತಿಸಲಾಗಿದೆ.

ಸೆ. 16ರಂದು ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ,ತನಿಖೆ ನಡೆಸಿದ ಸುಳ್ಯ ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂದಿ ತಂಡ ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ.

ಇದಲ್ಲದೆ ಆರೋಪಿ ಸುಬ್ರಮಣಿ ಕೆಲ ದಿನಗಳ ಹಿಂದೆ ಸುಳ್ಯ ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರ ಪರ್ಸ್ ತೆಗೆದುಕೊಂಡು ಹೋಗಿದ್ದು ತನಿಖೆ ವೇಳೆ ತಿಳಿದುಬಂದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News