ಸುಳ್ಯ: ಕೆರೆಗೆ ಬಿದ್ದು ವಿವಾಹಿತ ಮಹಿಳೆ ಮೃತ್ಯು

Update: 2023-10-20 15:05 GMT

ಸುಳ್ಯ : ಮಹಿಳೆಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಆಲೆಟ್ಟಿ ಗ್ರಾಮದ ಕೋಲ್ಚಾರಿನ ಕುಡೆಂಬಿಯಲ್ಲಿ ಶುಕ್ರವಾರ ನಡೆದಿದೆ.

ಗಿರೀಶ್ ಪಡ್ಡಂಬೈಲು ಎಂಬವರ ಪತ್ನಿ ತೀರ್ಥಕುಮಾರಿ ( 31) ಮೃತ ಮಹಿಳೆ.

ಅವರನ್ನು ಕಳೆದ ಒಂದು ವಾರದ ಹಿಂದೆ ಪುತ್ತೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಗುರುವಾರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕರೆದುಕೊಂಡು ಬರಲಾಗಿತ್ತು. ತೀರ್ಥಕುಮಾರಿ ಗುರುವಾರ ರಾತ್ರಿ ವೇಳೆ ಮನೆಯವರು ಮಲಗಿದ್ದ ಸಂದರ್ಭ ಎದ್ದು ಹೋಗಿದ್ದು ಬೆಳಗ್ಗೆ ನೋಡಿದಾಗ ನಾಪತ್ತೆಯಾಗಿದ್ದರು. ಮನೆಯವರು ಹುಡುಕಾಟ ನಡೆಸಿದಾಗ ಪಕ್ಕದ ಮನೆಯ ತೋಟದ ಕೆರೆಯಲ್ಲಿ ಮೃತದೇಹ ಕಂಡು ಬಂದಿದೆ.

ಇವರು ಕಳೆದ ಹಲವು ಸಮಯಗಳಿಂದ ಮಾನಸಿಕವಾಗಿ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರಿಗೆ ಪತಿ, ಓರ್ವ ಪುತ್ರ, ಪುತ್ರಿ ಇದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News