ಸುಳ್ಯ: ಅಡ್ಕಾರು ಮಾವಿನಕಟ್ಟೆ ಬಳಿ ಕಾರುಗಳ ಮಧ್ಯೆ ಸರಣಿ ಅಪಘಾತ

Update: 2023-08-27 16:34 GMT

ಸುಳ್ಯ: ಮೂರು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ, ಎರಡು ಕಾರುಗಳು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಜಖಂಗೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಬಳಿ ರವಿವಾರ ನಡೆದಿದೆ.

ಸುಳ್ಯದಿಂದ ಪುತ್ತೂರು ಕಡೆಗೆ ಮೂರು ಕಾರುಗಳು ಒಟ್ಟೊಟ್ಟಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನ ಕಾರಿನ ಚಾಲಕ ಬ್ರೇಕ್ ಹಾಕಿದ ಪರಿಣಾಮವಾಗಿ ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆಯಿತು. ಈ ಕಾರಿನ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದ್ದು, ಎರಡೂ ಕಾರುಗಳು ಪಲ್ಟಿಯಾಗಿ ಜಖಂಗೊಂಡಿದೆ.

ಅಪಘಾತಕ್ಕೀಡಾದ ಕಾರುಗಳಲ್ಲಿ ಒಂದು ಕಾರು ಸಂಪಾಜೆ ಮಲಯಾಳಿ ಚರ್ಚ್ ಫಾದರ್ ಜಿಮ್ಸ್ ಮ್ಯಾಥ್ಯೂ ಅವರದ್ದಾಗಿದ್ದು, ಮತ್ತೆರಡು ಕಾರುಗಳು ಕಾಸರಗೋಡು ಮೂಲದವರದು ಎಂದು ತಿಳಿದುಬಂದಿದೆ. ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದು, ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News