ಸುರತ್ಕಲ್‌ : ಕೆಲಸಕ್ಕೆ ತೆರಳಿದ್ದ ಯುವಕ ನಾಪತ್ತೆ

Update: 2023-10-23 16:14 GMT

ಸುರತ್ಕಲ್‌ : ಕೆಲಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ವರದಿಯಾಗಿದೆ.

ನಾಪತ್ತೆಯಾದವರನ್ನು ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಸುರೇಂದ್ರ ದೇವಾಡಿಗ (31) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸುರೇಂದ್ರ ಅವರು ಅ.20ರಂದು ಕೆಲಕ್ಕೆ ಹೋಗುವುದಾಗಿ ಮನೆಯಿಂದ ತೆರಳಿರುವವರು ಮನೆಗೆ ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಾರೆ. ಅವರು ನಾಪತ್ತೆಯಾಗಿರುವ ಕುರಿತು ಸಂಬಂಧಿಕರು ಮತ್ತು ಸ್ನೇಹಿತರಲ್ಲಿ ವಿಚಾರಿಸಿದ್ದು. ಎಲ್ಲೂ ಪತ್ತೆಯಾಗಿಲ್ಲ. ನಾಪತ್ತೆಯಾದ ದಿನದಿಂದ ಅವರ ಮೊಬೈಲ್‌ ಸ್ವಿಚ್ ಆಫ್‌ ಆಗಿದೆ ಎಂದು ಅವರ ಅಣ್ಣ ಪ್ರಸಾದ್‌ ಎಂಬವರು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News