ವಿಟ್ಲ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2023-08-07 17:00 GMT

ವಿಟ್ಲ: ಪ್ರಕರಣಯೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಪೆರುವಾಯಿ ಗ್ರಾಮದ ಕಿನಿಯರಪಾಲು ನಿವಾಸಿ ಸುಧೀರ್ ಕುಮಾರ್ (34) ಬಂಧಿತ ಆರೋಪಿ.

ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಈತನ ವಿರುದ್ಧ  ವಾರಂಟ್ ಹೊರಡಿಸಲಾಗಿತ್ತು. ವಿಟ್ಲ ಪೊಲೀಸ್ ಇನ್ ಸ್ಪೆಕ್ಟರ್ ನಾಗರಾಜ್ ಅವರ ಸೂಚನೆ ಮೇರೆಗೆ, ಎಸ್ಸೈ ಗಳಾದ ಕಾರ್ತಿಕ್ ಮತ್ತು ವಿದ್ಯಾ ಕೆ, ಸಿಬ್ಬಂದಿ  ಅಡ್ಯನಡ್ಕ ಎಂಬಲ್ಲಿ ಸುಧೀರ್ ಕುಮಾರ್ ನನ್ನು ಬಂಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News