ವ್ಯಕ್ತಿ ನಾಪತ್ತೆ

Update: 2023-08-02 15:11 GMT

ಮಂಗಳೂರು,ಆ.2: ಮುಲ್ಕಿ ತಾಲೂಕಿನ ಹಳೆಯಂಗಡಿ ಗ್ರಾಮದ ಕದ್ರಾತೋಟ ಎಂಬಲ್ಲಿ ವಾಸವಾಗಿದ್ದ ದೇವದಾಸ (52) ಜು.25ರಿಂದ ಕಾಣೆಯಾಗಿರುವ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5.6 ಅಡಿ ಎತ್ತರದ, ಎಣ್ಣೆ ಕಪ್ಪು ಮೈಬಣ್ಣದ ಇವರು ಸಾಧಾರಣ ಶರೀರ ಹೊಂದಿರುತ್ತಾರೆ. ನೀಲಿ ಬಣ್ಣದ ಚೌಕುಳಿ, ಅರ್ಧ ತೋಳಿನ ಶರ್ಟ್ ಮತ್ತು ಬೂದು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ, ತುಳು ಮಾತನಾಡುತ್ತಾರೆ. ಇವರು ಪತ್ತೆಯಾದಲ್ಲಿ ದೂ:ಸಂ 0824- 2290533, 9480805359, 9480805332 ಅಥವಾ ಮಂಗಳೂರು ನಗರ ಕಂಟ್ರೋಲ್ ರೂಂ: 0824-2220800ನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News