ಉಳ್ಳಾಲ : ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸನ್ಮಾನ

Update: 2024-09-02 16:46 GMT

ಉಳ್ಳಾಲ : ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸ್ಥಾನ ಪಡೆದವರು ಪಕ್ಷದ ನೆಲೆಯಲ್ಲಿ ಎಲ್ಲರೂ ಜತೆಯಾಗಿ ಕೆಲಸ ಮಾಡಬೇಕಾಗಿದೆ. ಅಭಿವೃದ್ಧಿ ನಮ್ಮ ಗುರಿ ಆಗಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದರು.

ಅವರು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಕಚೇರಿಯಲ್ಲಿ ನಡೆದ ನಗರ ಸಭೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ರಿಗೆ ಸನ್ಮಾನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸ್ಥಾನ ಪಡೆದವರಿಗೆ ಏರ್ಪಡಿಸಲಾಗಿದ್ದ ಗೌರವಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭ ಉಳ್ಳಾಲ ನಗರ ಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಿಶಿಕಲಾ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಪ್ನಾ ಹರೀಶ್ ಅವರನ್ನು ಸನ್ಮಾನಿಸಲಾಯಿತು.

ಗ್ಯಾರಂಟಿ ಯೋಜನೆ ಅಧ್ಯಕ್ಷ ರಫೀಕ್ ಅಂಬ್ಲಮೊಗರು, ಸದಸ್ಯ ರಾದ ದೇವಣ್ಣ ಶೆಟ್ಟಿ, ಬಶೀರ್ ಉಂಬುದ, ಮಂಜುನಾಥ, ಸಲಾಂ, ರೇವತಿ ಪೂಜಾರಿ, ಜೆಸಿಂತಾ ಮೆಂಡೋನ್ಸಾ, ಅಹ್ಮದ್ ಹನೀಫ್ ಕೆ.ಎಂ,ಅಬು ಶಮೀರ್, ಪುಂಡರೀಕಾಕ್ಷ ಕುಲಾಲ್, ರಾಘವ ಉಚ್ಚಿಲ,ವಕ್ಫ್ ಬೋರ್ಡ್ ರಾಜ್ಯ ಸದಸ್ಯ ರಝಿಯಾ ಇಬ್ರಾಹಿಂ ರವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಯೂಸುಫ್ ಬಾವ, ಡಿಸಿಸಿ ಸದಸ್ಯ ಮೊಹಮ್ಮದ್ ಮೋನು, ದೀಪಕ್ ಪಿಲಾರ್, ಕಿಸಾನ್ ಘಟಕದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಚಂದ್ರಿಕಾ ರೈ, ಡಿಸಿಸಿ ಸದಸ್ಯ ಝಕರಿಯಾ ಮಲಾರ್, ರೂಪೇಶ್ ಭಟ್ನಗರ, ಕೆಡಿಪಿ ಸದಸ್ಯ ಹಮೀದ್ ಕಿನ್ಯ, ನಾಸೀರ್ ಅಹ್ಮದ್ ಸಾಮಣಿಗೆ , ವಿವಿ ಸಿಂಡಿಕೇಟ್ ಸದಸ್ಯ ಅಚ್ಯುತ ಗಟ್ಟಿ, ಉಸ್ಮಾನ್ ಕಲ್ಲಾಪು, ನಗರ ಸಭೆ ಮಾಜಿ ಅಧ್ಯಕ್ಷ ಕುಂಞಿ ಮೋನು ಉಳ್ಳಾಲ, ಪುರೂಷೊತ್ತಮ ಶೆಟ್ಟಿ, ಚಂಚಲಾಕ್ಷಿ, ಮನ್ಸೂರ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ.ಕೆ.ಅಬ್ದುಲ್ ರಹಿಮಾನ್ ಕೋಡಿಜಾಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News