ಉಪ್ಪಿನಂಗಡಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ; ಸವಾರ ಮೃತ್ಯು

Update: 2023-07-26 17:41 GMT

ಉಪ್ಪಿನಂಗಡಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿಯಲ್ಲಿ ಜು.25ರ ರಾತ್ರಿ ನಡೆದಿದೆ.

ನೆಲ್ಯಾಡಿಯ ಮೊರಂಕಳ ನಿವಾಸಿ ಇಕ್ಬಾಲ್ ಮೃತ ಬೈಕ್ ಸವಾರ. ಅವರು ಪುತ್ತೂರಿನಲ್ಲಿ ಉದ್ಯೋಗದಲ್ಲಿರುವ ತನ್ನ ಸಹೋದರನನ್ನು ಭೇಟಿಯಾಗಿ ಬೈಕ್‍ನಲ್ಲಿ ನೆಲ್ಯಾಡಿ ಕಡೆ ತೆರಳುತ್ತಿರುವ ಸಂದರ್ಭ ರಾತ್ರಿ ಸುಮಾರು 11ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಈ ಸಂದರ್ಭ ಈ ಭಾಗದಲ್ಲಿ ಜಡಿ ಮಳೆ ಬರುತ್ತಿದ್ದು, ಆದ್ದರಿಂದ ಎದುರುಗಡೆ ಕೆಟ್ಟು ನಿಂತಿರುವ ಲಾರಿ ಕಾಣದೆ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ಇಕ್ಬಾಲ್ ನೆಲ್ಯಾಡಿಯಲ್ಲಿ ರಿಕ್ಷಾ ಚಾಲಕನಾಗಿ ದುಡಿಯುತ್ತಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News