ಸದನದಲ್ಲಿ ತುಳು ಮಾತನಾಡಲು ಅವಕಾಶ : ಸ್ಪೀಕರ್ ಯು.ಟಿ.ಖಾದರ್ ಅವರಿಗೆ ತುಳು ಅಕಾಡೆಮಿಯ ವತಿಯಿಂದ ಸನ್ಮಾನ

Update: 2024-07-29 13:38 IST
ಸದನದಲ್ಲಿ ತುಳು ಮಾತನಾಡಲು ಅವಕಾಶ : ಸ್ಪೀಕರ್ ಯು.ಟಿ.ಖಾದರ್ ಅವರಿಗೆ ತುಳು ಅಕಾಡೆಮಿಯ ವತಿಯಿಂದ ಸನ್ಮಾನ
  • whatsapp icon

ಮಂಗಳೂರು : ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಮಂಗಳೂರಲ್ಲಿ ಸನ್ಮಾನಿಸಿದರು.

ಖಾದರ್ ಅವರಿಗೆ ಶಾಲು ಹಾಗೂ ಪುಸ್ತಕ ಮತ್ತು ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ರೋಹಿತ್ ಉಳ್ಳಾಲ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಷಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News