ಸುಳ್ಯ: ವಾಹನ ಢಿಕ್ಕಿ; ಪಾದಚಾರಿ ಸ್ಥಳದಲ್ಲೇ ಮೃತ್ಯು

Update: 2023-09-05 17:15 GMT

ಸುಳ್ಯ: ಸ್ಕಾರ್ಪಿಯೋ ಢಿಕ್ಕಿ ಹೊಡೆದು ಪಾದಚಾರಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಮಾಣಿ - ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರು ಎಂಬಲ್ಲಿ ಸಂಭವಿಸಿದೆ.

ಹುಬ್ಬಳ್ಳಿ-ಧಾರವಾಡ ಮೂಲದ ಕಾರ್ಮಿಕ ಅಣ್ಣಪ್ಪ (40) ಮೃತರು.

ಕಾಸರಗೋಡು ಬಂದ್ಯಡ್ಕದ ಅನಿಲ್ ಎಂಬವರು ಉಡುಪಿಯಿಂದ ಊರಿಗೆ ಹೋಗುತ್ತಿದ್ದಾಗ ಅಡ್ಕಾರಿನಲ್ಲಿ ನಿಯಂತ್ರಣ ತಪ್ಪಿದ ಸ್ಕಾರ್ಪಿಯೋ ಪಾದಚಾರಿಗೆ ಢಿಕ್ಕಿಯಾಗಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿದ್ದ ಅಣ್ಣಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ. ಸುಳ್ಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಕೆಲವು ದಿನಗಳ ಹಿಂದೆ ಇಲ್ಲಿಗೆ ಸಮೀಪದಲ್ಲೇ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಢಿಕ್ಕಿಯಾಗಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News