ಮಣಿಪುರದಲ್ಲಿ ಹಿಂಸಾಚಾರ: ಬಂಟ್ವಾಳ ಕಾಂಗ್ರೆಸ್ ಪ್ರತಿಭಟನೆ

Update: 2023-07-24 16:38 GMT

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಮಣಿಪುರದಲ್ಲಿ ನಡೆದ ದಾರುಣ ಘಟನೆಗೆ ಪ್ರಬಲ ವಿರೋಧ ವ್ಯಕ್ತಪಡಿಸಿ, ಆಡಳಿತರೂಢ ಸರಕಾರದ ವೈಫಲ್ಯ ಖಂಡಿಸಿ, ಮಣಿಪುರ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಆಗ್ರಹಿಸಿ, ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಸೋಮವಾರ ಬಿ.ಸಿ. ರೋಡು ಜಂಕ್ಷನ್ನಿನಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಬಳಿಕ ದೇಶದ ಜನತಗೆ ನೆಮ್ಮದಿಯೇ ಇಲ್ಲವಾಗಿದೆ. ಜಾತಿ-ಧರ್ಮಗಳ ಆಧಾರದಲ್ಲಿ ಹಿಂಸೆ, ಕೊಲೆ, ಅರಾಜಕತೆಗಳು ನಡೆಯುವುದು ಬಿಟ್ಟರೆ ಜನಪರ ಕಾರ್ಯಕ್ರಮಗಳ ಜಾರಿಯೇ ಇಲ್ಲದಾಗಿದೆ ಎಂದು ಆರೋಪಿಸಿದರು.

ಪಕ್ಷ ಪ್ರಮುಖರಾದ ಪಿಯೂಸ್ ಎಲ್ ರೋಡ್ರಿಗಸ್, ಎಂ ಅಶ್ವನಿ ಕುಮಾರ್ ರೈ, ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಎಂ.ಎಸ್.ಮುಹಮ್ಮದ್, ಪದ್ಮಶೇಖರ ಜೈನ್, ಮಾಯಿಲಪ್ಪ ಸಾಲ್ಯಾನ್, ಬಿ.ಎಂ. ಅಬ್ಬಾಸ್ ಅಲಿ, ಲುಕ್ಮಾನ್ ಬಂಟ್ವಾಳ, ಸದಾಶಿವ ಬಂಗೇರ, ಸುಭಾಶ್ಚಂದ್ರ ಶೆಟ್ಟಿ, ಸಂಜೀವ ಪೂಜಾರಿ, ಕೆ.ಪದ್ಮನಾಭ ರೈ, ಮುಹಮ್ಮದ್ ನಂದರಬೆಟ್ಟು, ಅಲ್ಬರ್ಟ್ ಮಿನೇಜಸ್, ಲವೀನಾ ವಿಲ್ಮಾ ಮೊರಾಸ್, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಇಬ್ರಾಹಿಂ ನವಾಝ್ ಬಡಕಬೈಲು, ಮಹಮ್ಮದ್ ನಂದಾವರ, ವಿಶ್ವನಾಥ ಗೌಡ ಮಣಿ, ಸಿದ್ದೀಕ್ ಸರವು, ಸುರೇಶ್ ನಾವೂರು, ವೆಂಕಪ್ಪ ಪೂಜಾರಿ, ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News