ವಿಟ್ಲ | ಅಡ್ಯನಡ್ಕದಲ್ಲಿ ಬ್ಯಾಂಕ್ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು

Update: 2024-02-08 06:09 GMT

ವಿಟ್ಲ, ಫೆ.8: ಕರ್ಣಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಗೆ ಕಳ್ಳರು ನುಗ್ಗಿರುವ ಘಟನೆ ಬುಧವಾರ ರಾತ್ರಿ ನಡೆದಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಬ್ಯಾಂಕಿನ ಕಿಟಕಿಯ ಸರಳುಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆನ್ನಲಾಗಿದೆ. ಬ್ಯಾಂಕಿನಿಂದ ನಗ-ನಗದು ಕಳವಾಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಸುಮಾರು 20 ವರ್ಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಕಾರ್ಯಾಚರಿಸುತ್ತಿದ್ದು, ಬ್ಯಾಂಕ್ ನ ಸುತ್ತಲೂ ಗಿಡಗಂಟಿ, ಪೊದೆಗಳು ಆವರಿಸಿವೆ.


 






 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News