ವಿಟ್ಲ: ಯುವಕ ಆತ್ಮಹತ್ಯೆ

Update: 2023-08-17 04:19 GMT

ವಿಟ್ಲ, ಆ.17: ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರಾಜೆ ಎಂಬಲ್ಲಿ ನಡೆದಿರುವುದು ವರದಿಯಾಗಿದೆ.

ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಗುರುವಾರ ಮುಂಜಾನೆ 2 ಗಂಟೆ ಬಳಿಕ ಇವರು ಬಾವಿಗೆ ಹಾರಿರಬೇಕು ಎಂದು ಶಂಕಿಸಲಾಗಿದೆ.

ಪ್ರಶಾಂತ್ ಅವರ ದೊಡ್ಡಮ್ಮ ವಾರಗಳ ಹಿಂದೆ ತೀರಿಕೊಂಡಿದ್ದು, ಅವರ ಉತ್ತರಕ್ರಿಯೆ ಕಾರ್ಯಕ್ರಮ ಬುಧವಾರ ಅವರ ಮನೆಯಲ್ಲಿ ನಡೆದಿತ್ತು. ಕಾರ್ಯಕ್ರಮ ಮುಗಿದ ಬಳಿಕ ಮನೆಮಂದಿ ಮಲಗಿದ್ದರು. ಆದೇ ಸಮಯದಲ್ಲಿ ಇವರು ಮನೆಯಿಂದ ಹೊರಗೆ ಬಂದು ಮನೆಯ ಸಮೀಪದ ಬಾವಿಗೆ ಹಾರಿರಬೇಕು ಎಂದು ಮನೆಮಂದಿ ಶಂಕಿಸಿದ್ದಾರೆ.

ನೇರಳಕಟ್ಟೆ ಅಗ್ರಿ ಎಂಬ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದರು.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೋಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News