ಅ.12ರಂದು ನಿಮ್ಮ ಮೊಬೈಲ್ ಕಂಪಿಸಲಿದೆ: ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಪ್ರಾಯೋಗಿಕ ಪರೀಕ್ಷೆ

Update: 2023-10-10 18:21 GMT

ಮಂಗಳೂರು, ಅ.10: ಭಾರತದ ದೂರಸಂಪರ್ಕ ಇಲಾಖೆ (ಡಿಒಟಿ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಅ.12ರಂದು ಪ್ರಾಯೋಗಿಕ ಪರೀಕ್ಷೆ ನಡೆಸಲಿದೆ.

ಈ ಸಂದರ್ಭದಲ್ಲಿ ಧ್ವನಿ ಮತ್ತು ಕಂಪನದೊಂದಿಗೆ ನಿಮ್ಮ ಮೊಬೈಲ್ ಫೋನ್‌ಗೆ ಎಚ್ಚರಿಕೆಯ ಸಂದೇಶ ಬರಲಿದೆ.

ಈ ಎಚ್ಚರಿಕೆಗಳು ವಿಪತ್ತು ಸಂದರ್ಭದಲ್ಲಿ ಜನರನ್ನು ಎಚ್ಚರಿಸುವ ಯೋಜಿತ ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದೆ . ಯಾರೂ ಕೂಡಾ ಈ ಎಚ್ಚರಿಕೆಯ ಹಿನ್ನೆಯಲ್ಲಿ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಭಾರತದ ದೂರಸಂಪರ್ಕ ಇಲಾಖೆ (ಡಿಒಟಿ) ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News