ಯುವಕ ಆತ್ಮಹತ್ಯೆ

Update: 2023-10-31 16:18 GMT

ಮಂಗಳೂರು, ಅ.31: ನಗರದ ಕದ್ರಿ ಕಂಬಳದ ಅಪಾರ್ಟ್‌ಮೆಂಟ್‌ವೊಂದರ ಫೆಸಿಲಿಟಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಬಂಟ್ವಾಳ ಮೂಲದ ಹರೀಶ್ ಕುಮಾರ್ (38) ಎಂಬವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಕರಣ ದಾಖಲಿಸಿರುವ ಕದ್ರಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಹರೀಶ್ ಕುಮಾರ್‌ರ ಮೃತದೇಹ ಸೋಮವಾರ ಮಧ್ಯಾಹ್ನದ ವೇಳೆ ಅಪಾರ್ಟ್‌ಮೆಂಟ್‌ನಲ್ಲಿ ಅವರ ವಾಸವಾಗಿದ್ದ ಕೊಠಡಿಯಲ್ಲಿ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News