ಮೇಘಾಲಯದಲ್ಲಿ ಪ್ರವಾಹ ಸೃಷ್ಟಿಸಿದ ಭಾರೀ ಮಳೆ: ಒಂದೇ ಕುಟುಂಬದ 7 ಮಂದಿ ಸೇರಿ 10 ಮಂದಿ ಬಲಿ

Update: 2024-10-06 06:12 GMT

Photo: PTI

ಶಿಲ್ಲಾಂಗ್: ಕಳೆದ 24 ಗಂಟೆಗಳಿಂದ ಮೇಘಾಲಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ 10 ಮಂದಿ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಮಳೆಯಿಂದಾಗಿ ಶಿಲ್ಲಾಂಗ್ ಜಿಲ್ಲೆಯ ಗಸ್ವಾಪರ ಪ್ರಾಂತ್ಯದಲ್ಲಿ ಭೂಕುಸಿತವುಂಟಾಗಿದೆ ಎಂದು ಅವರು ತಿಳಿಸಿದ್ದಾರೆ.

ಶನಿವಾರ ಉಂಟಾದ ಭೂಕುಸಿತದ ಸಂದರ್ಭದಲ್ಲಿ ಹತಿಯಾಸಿಯ ಸಂಗ್ನಾ ಗ್ರಾಮದ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೃತಪಟ್ಟವರ ಪೈಕಿ ಮೂವರು ಮಕ್ಕಳು ಸೇರಿದ್ದಾರೆ.

ಗಾರೋ ಗುಡ್ಡುಗಾಡು ಪ್ರದೇಶದ ಐದು ಜಿಲ್ಲೆಗಳ ಪರಿಸ್ಥಿತಿ ಪರಾಮರ್ಶೆ ನಡೆಸಲು ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಸಭೆ ನಡೆಸಿದರು. ಪ್ರವಾಹ ಮತ್ತು ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ, ಈ ಕೂಡಲೇ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News