ಬಿಹಾರ ಕಳ್ಳಭಟ್ಟಿ ದುರಂತ | ಮತ್ತೆ 10 ಮಂದಿ ಮೃತ್ಯು; ಮೃತರ ಸಂಖ್ಯೆ 35ಕ್ಕೆ ಏರಿಕೆ

Update: 2024-10-18 09:29 GMT

Photo: businesstoday.in

ಪಾಟ್ನಾ: ಬಿಹಾರದ ಸಿವಾನ್ ಮತ್ತು ಸರಣ್ ಜಿಲ್ಲೆಗಳಲ್ಲಿ ನಡೆದ ಕಳ್ಳಭಟ್ಟಿ ಮದ್ಯ ಸೇವನೆ ದುರಂತದಲ್ಲಿ ಮತ್ತೆ 10 ಮಂದಿ ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸಿವಾನ್ ಜಿಲ್ಲೆಯಲ್ಲಿ 28 ಮಂದಿ ಮೃತಪಟ್ಟಿದ್ದು, ಸರಣ್ ಜಿಲ್ಲೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಉಪ ಪೊಲೀಸ್ ಮಹಾ ನಿರೀಕ್ಷಕ ನೀಲೇಶ್ ಕುಮಾರ್ ದೃಢಪಡಿಸಿದ್ದಾರೆ.

“ಸಿವಾನ್ ಜಿಲ್ಲೆಯ ಮಘರ್ ಹಾಗೂ ಔರಿಯ ಪಂಚಾಯತ್ ವ್ಯಾಪ್ತಿಯಲ್ಲಿ ಶಂಕಿತ ಕಳ್ಳಭಟ್ಟಿ ಮದ್ಯ ಸೇವಿಸಿ ಕನಿಷ್ಠ ಪಕ್ಷ 28 ಮಂದಿ ಮೃತಪಟ್ಟಿದ್ದರೆ, ಸರಣ್ ಜಿಲ್ಲೆಯ ಮಶ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ರಾಹಿಂಪುರ್ ನಲ್ಲೂ ಏಳು ಮಂದಿ ಮೃತಪಟ್ಟಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕಳ್ಳಭಟ್ಟಿ ಮದ್ಯ ಸೇವನೆ ದುರಂತವು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಎಂಟು ವರ್ಷಗಳ ಹಿಂದೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾರಿಗೆ ತಂದಿದ್ದ ಮದ್ಯಪಾನ ನಿಷೇಧದ ಪರಿಣಾಮಕಾರಿ ಜಾರಿಯ ಬಗ್ಗೆ ವಿರೋಧ ಪಕ್ಷಗಳು ಪ್ರಶ್ನೆಯೆತ್ತಿವೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News