ಬಿಜೆಪಿಯಿಂದ 27 ಸದಸ್ಯರ ಪ್ರಣಾಳಿಕೆ ಸಮಿತಿ ಘೋಷಣೆ

Update: 2024-03-30 16:53 GMT

ರಾಜನಾಥ್ ಸಿಂಗ್ | Photo: PTI 

ಹೊಸದಿಲ್ಲಿ : ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಸಿದ್ಧಪಡಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಹಲವು ಕೇಂದ್ರ ಸಚಿವರು ಹಾಗೂ ಸಿಎಂಗಳನ್ನು ಒಳಗೊಂಡ 27 ಸದಸ್ಯರ ಸಮಿತಿಯನ್ನು ಬಿಜೆಪಿ ಶನಿವಾರ ಘೋಷಿಸಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮಿತಿಯ ಸಂಚಾಲಕರು ಹಾಗೂ ಕೇಂದ್ರ ಸಚಿವ ಪೀಯೂಷ್ ಗೋಯಲ್ ಸಹ ಸಂಚಾಲಕರಾಗಿದ್ದಾರೆ.

ನಾಲ್ಕು ರಾಜ್ಯಗಳಾದ ಗುಜರಾತ್ ನ ಸಿಎಂ ಭೂಪೇಂದ್ರ ಪಟೇಲ್, ಅಸ್ಸಾಂನ ಸಿಎಂ ಹಿಮಾಂತ ಬಿಸ್ವಾ ಶರ್ಮಾ, ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್, ಚತ್ತೀಸ್ಗಡದ ಸಿಎಂ ವಿಷ್ಣು ದೇವ್ ಸಾಯಿ ಅಲ್ಲದೆ, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈ ಸಮಿತಿಯಲ್ಲಿದ್ದಾರೆ.

ಅಲ್ಲದೆ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಅಶ್ವಿನಿ ವೈಷ್ಣವ್, ಭೂಪೇಂದ್ರ ಯಾದವ್, ಕಿರಣ್ ರಿಜೆಜು, ಅರ್ಜುನ್ ಮುಂಡಾ, ಅರ್ಜುನ್ ರಾಮ್ ಮೇಘವಲ್, ಸ್ಮೃತಿ ಇರಾನಿ, ರಾಜೀವ್ ಚಂದ್ರಶೇಖರ್ ಹಾಗೂ ಇತರರು ಇದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News