ಟಿಪ್ಪರ್ ಢಿಕ್ಕಿ ಹೊಡೆದು ಬಸ್‌ಗೆ ಬೆಂಕಿ: ಆರು ಮಂದಿ ಸಜೀವ ದಹನ

Update: 2024-05-15 06:37 GMT

ಅಮರಾವತಿ: ಟಿಪ್ಪರ್ ಲಾರಿಯೊಂದು ಖಾಸಗಿ ಬಸ್ ಒಂದಕ್ಕೆ ಢಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಪಲ್ನಾಡು ಜಿಲ್ಲೆಯ ಚಿಲಕಲುರಿಪೇಟ್ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿಯೊಬ್ಬರು, “ಕೆಲವು ಜನಗಳಿಂದ ನಮಗೆ ಘಟನೆಯ ಮಾಹಿತಿ ದೊರೆಯಿತು. ನಾವು ಕೂಡಲೇ ಆ್ಯಂಬುಲೆನ್ಸ್ ಸೇವೆ ಹಾಗೂ ಅಗ್ನಿಶಾಮಕ ಸೇವೆಗೆ ಮಾಹಿತಿ ರವಾನಿಸಿದೆವು. ನಾವು ಸ್ಥಳಕ್ಕೆ ತೆರಳುವ ಹೊತ್ತಿಗೆ ಬಸ್ ಸುತ್ತ ಬೆಂಕಿಯ ಜ್ವಾಲೆಗಳು ಆವರಿಸಿದ್ದವು. ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ಘಟನೆಯಲ್ಲಿ ಎರಡೂ ವಾಹನಗಳ ಚಾಲಕರು ಮೃತಪಟ್ಟಿದ್ದಾರೆ” ಎಂದು ಸುದ್ದಿ ವಾಹಿನಿಗಳಿಗೆ ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News