ಆಪ್ ನಾಯಕ ಮನೀಷ್ ಸಿಸೋಡಿಯಾಗೆ ಹೈಕೋರ್ಟ್‌ ನಿಂದ 3 ದಿನ ಜಾಮೀನು

Update: 2024-02-12 16:48 GMT

 ಮನೀಷ್ ಸಿಸೋಡಿಯಾ | Photo: PTI  

ಹೊಸದಿಲ್ಲಿ : ತನ್ನ ಸೊಸೆಯ ವಿವಾಹದಲ್ಲಿ ಪಾಲ್ಗೊಳ್ಳಲು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಷ್ ಸಿಸೋಡಿಯಾ ಅವರಿಗೆ ದಿಲ್ಲಿ ಉಚ್ಛ ನ್ಯಾಯಾಲಯ ಸೋಮವಾರ ಮೂರು ದಿನಗಳ ಮಧ್ಯಂತರ ಜಾಮೀನು ನೀಡಿದೆ.

ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಅನುಕ್ರಮವಾಗಿ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಹಾಗೂ ಹಣ ವರ್ಗಾವಣೆ ಪ್ರಕರಣಗಳಲ್ಲಿ ಮನೀಷ್ ಸಿಸೋಡಿಯಾ ಅವರಿಗೆ ಫೆಬ್ರವರಿ 13ರಿಂದ 15ರ ವರೆಗೆ ವಿಶೇಷ ನ್ಯಾಯಾಧೀಶ ಎಂ.ಕೆ. ನಾಗಪಾಲ್ ಜಾಮೀನು ನೀಡಿದ್ದಾರೆ.

ಭ್ರಷ್ಟಾಚಾರ ಹಾಗೂ ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮನೀಷ್ ಸಿಸೋಡಿಯಾ ಅವರನ್ನು ಸಿಬಿಐ 2023 ಫೆಬ್ರವರಿ 26ರಂದು ಬಂಧಿಸಿತ್ತು. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News