ಭೀಕರ ರಸ್ತೆ ಅಪಘಾತ: ವಿವಾಹ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ 9 ಮಂದಿ ಮೃತ್ಯು

Update: 2024-04-21 05:05 GMT

Screengrab:X/@PTI_News

ಝಲಾವರ್ (ರಾಜಸ್ಥಾನ): ರವಿವಾರ ಮುಂಜಾನೆ ಕಾರು ಹಾಗೂ ಟ್ರಕ್ ಒಂದರ ನಡುವೆ ಸಂಭವಿಸಿರುವ ಮುಖಾಮುಖಿ ಢಿಕ್ಕಿಯಲ್ಲಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ ನಡೆದಿದೆ. ಅವರೆಲ್ಲ ವಿವಾಹ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ತಮ್ಮ ಗ್ರಾಮಕ್ಕೆ ಮರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಝಲಾವರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರಿಚಾ ತೋಮರ್, ಮೃತರು ಭೋಪಾಲ್ ನ ಡುಂಗ್ರಿ ಗ್ರಾಮದಲ್ಲಿ ಜರುಗಿದ್ದ ವಿವಾಹ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಸ್ವಗ್ರಾಮಕ್ಕೆ ಮರಳುವಾಗ ರವಿವಾರ ಮುಂಜಾನೆ 2.45ರ ವೇಳೆಗೆ ಎಕ್ಲೇರಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

ಇಬ್ಬರು ಅಪಘಾತ ನಡೆದ ಸ್ಥಳದಲ್ಲೇ ಮೃತಪಟ್ಟಿದ್ದರೆ, ಉಳಿದ ಏಳು ಮಂದಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಝಲಾವರ್ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News