ಸಿಎಂ ಆದಿತ್ಯನಾಥ್ ಪ್ರತಿಷ್ಠೆಗೆ ಕಳಂಕ ತಂದ ಆರೋಪ : 14 ತಿಂಗಳ ಜೈಲು ಶಿಕ್ಷೆ ಬಳಿಕ ಯುವಕನಿಗೆ ಜಾಮೀನು

Update: 2023-09-16 14:03 GMT

ಆದಿತ್ಯನಾಥ್ | Photo: PTI 

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಪ್ರತಿಷ್ಠೆಗೆ ಕಳಂಕ ತಂದ ಆರೋಪದ ಮೇಲೆ ಜುಲೈ 2022 ರಲ್ಲಿ ಬಂಧಿಸಲ್ಪಟ್ಟಿದ್ದ ಇಬ್ನುಲ್ ಹುಸೇನ್ ಎಂಬ ಯುವಕನಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರು, ಆರೋಪಿಯು 22 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು, ಯಾವುದೇ ಪೂರ್ವ ಕ್ರಿಮಿನಲ್ ದಾಖಲೆಯಿಲ್ಲ ಎಂದು ಪರಿಗಣಿಸಿ ಜಾಮೀನು ಅರ್ಜಿಯನ್ನು ಪರಿಗಣಿಸಿದ್ದಾರೆ. ಬಂಧಿತ ಯುವಕ ಜುಲೈ 21, 2022 ರಿಂದ ಬಂಧನದಲ್ಲಿದ್ದರು.

ದೂರುದಾರ ಹಾಗೂ ಕಕ್ಷಿದಾರರ ನಡುವೆ ಆಸ್ತಿ ವಿವಾದ ನಡೆಯುತ್ತಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ದೂರಿನ ಪ್ರಕಾರ, ದೂರುದಾರರು ವಿವಾದಕ್ಕೆ ಸಂಬಂಧಿಸಿದ ವೀಡಿಯೊವನ್ನು ರೆಕಾರ್ಡ್ ಮಾಡುತ್ತಿದ್ದಾಗ, ಆರೋಪಿ ಇಬ್ನುಲ್ ಹುಸೇನ್ ತನ್ನ ಫೋನ್‌ ತನ್ನ ಮೊಬೈಲ್ ಫೋನ್ ಅನ್ನು ಬಲವಂತವಾಗಿ ತೆಗೆದುಕೊಂಡಿದ್ದು, ದುರ್ಬಳಕೆ ಮಾಡಿದ್ದಾರೆ, ತನ್ನ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಂಡು, ಅನುಚಿತ ಚಿತ್ರಗಳನ್ನು ಹರಡುವ ಮೂಲಕ ರಾಜ್ಯದ ಮುಖ್ಯಮಂತ್ರಿಯ ಪ್ರತಿಷ್ಠೆಗೆ ಕಳಂಕ ತಂದಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ.

ಪ್ರಕರಣದ ಸಂದರ್ಭಗಳನ್ನು ಪರಿಗಣಿಸಿ, ನ್ಯಾಯಾಲಯವು ಇಬ್ನುಲ್ ಹುಸೇನ್‌ಗೆ ಜಾಮೀನು ನೀಡಿದೆ. ಈ ಘಟನೆಯು ಜನವರಿ 2022 ರಲ್ಲಿ ಅನಿರ್ದಿಷ್ಟ ದಿನಾಂಕದಂದು ಸಂಭವಿಸಿದ್ದು, ಆರು ತಿಂಗಳ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ನ್ಯಾಯಾಲಯ ಗಮನಿಸಿದೆ. ಅಲ್ಲದೆ, ಆರೋಪಿಯಿಂದ ಯಾವುದೇ ದೋಷಾರೋಪಣೆಗೆ ಪೂರಕವಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿಲ್ಲ ಎಂಬುದನ್ನು ನ್ಯಾಯಾಲಯ ಗಮನಿಸಿದೆ.

ಈ ಹಿನ್ನೆಲೆಯಲ್ಲಿ, ಭಾರತೀಯ ದಂಡ ಸಂಹಿತೆ ಮತ್ತು ಐಟಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಆರೋಪಿಗೆ ಮ್ಯಾಜಿಸ್ಟ್ರೇಟ್ ಅಥವಾ ಸಂಬಂಧಿತ ನ್ಯಾಯಾಲಯದಲ್ಲಿ ವೈಯಕ್ತಿಕ ಬಾಂಡ್ ಮತ್ತು ತಲಾ ಇಬ್ಬರು ಶ್ಯೂರಿಟಿಗಳನ್ನು ಒದಗಿಸುವಂತೆ ಹೈಕೋರ್ಟ್ ಆದೇಶಿಸಿತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News