ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ: ಎಐಎಡಿಎಂಕೆ ನಾಯಕ ಡಿ.ಜಯಕುಮಾರ್

Update: 2024-01-30 09:09 GMT

(Image: File photo/PTI)

ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಐಎಡಿಎಂಕೆ ನಾಯಕ ಡಿ.ಜಯಕುಮಾರ್ ಹೇಳಿದ್ದಾರೆ ಎಂದು The Hindu ಸುದ್ದಿ ಸಂಸ್ಥೆ ವರದಿ ಮಾಡಿದೆ.

ಆಗಸ್ಟ್ ತಿಂಗಳಲ್ಲಿ NDA ಮೈತ್ರಿಕೂಟದಿಂದ ಹೊರ ನಡೆಯುವ ಮೂಲಕ ಬಿಜೆಪಿಯೊಂದಿಗಿನ ಮೈತ್ರಿಯನ್ನು ಎಐಎಡಿಎಂಕೆ ಪಕ್ಷವು ಅಧಿಕೃತವಾಗಿ ಅಂತ್ಯಗೊಳಿಸಿತ್ತು. ಈ ನಿರ್ಧಾರವನ್ನು ತನ್ನ ಎರಡು ಕೋಟಿ ಕಾರ್ಯಕರ್ತರ ಬಯಕೆ ಹಾಗೂ ಭಾವನೆಗಳನ್ನು ಗೌರವಿಸಲು ಕೈಗೊಳ್ಳಲಾಗಿದೆ ಎಂದು ಅದು ಹೇಳಿತ್ತು.

2024ರ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಮಾಡಿಕೊಳ್ಳಲು ಎಐಎಡಿಎಂಕೆ ಪಕ್ಷವು ಹಲವಾರು ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದೆ. ಈ ಕುರಿತು ಸೂಕ್ತ ಸಮಯದಲ್ಲಿ ಪ್ರಕಟಿಸಲಾಗುವುದು ಎಂದು ಸೋಮವಾರ ಡಿ.ಜಯಕುಮಾರ್ ತಿಳಿಸಿದ್ದಾರೆ.

ಈ ಪ್ರಕಟಣೆಯು, ಸಾರ್ವತ್ರಿಕ ಚುನಾವಣೆಗಾಗಿ ರಚನೆಯಾಗಿರುವ ಎಐಎಡಿಎಂಕೆಯ ಸೀಟು ಹಂಚಿಕೆ ಸಮಿತಿ ಹಾಗೂ ಚುನಾವಣಾ ಪ್ರಚಾರ ಸಮಿತಿಯ ಪ್ರಥಮ ಸಭೆ ನಡೆದ ನಂತರ ಹೊರ ಬಿದ್ದಿದೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News