ಆಂಧ್ರಪ್ರದೇಶ :ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Update: 2023-12-28 13:19 GMT

 ಅಂಬಟಿ ರಾಯುಡು , ಜಗನ್ ಮೋಹನ್ ರೆಡ್ಡಿ | Photo: X \ @YSJaganTrends

ಗುಂಟೂರು : ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಅವರು ಗುರುವಾರ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಆಂದ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ, ಅಂಬಾಟಿರಾಯುಡು ಗೆ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಗುಂಟೂರು ಕ್ಷೇತ್ರದಿಂದ ಮುಂದಿನ ಸಂಸತ್ ಚುನಾವಣೆಯಲ್ಲಿ ವೈಎಸ್ಆರ್ ಪಕ್ಷದಿಂದ ಸ್ಫರ್ಧಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಯುಡು ಈಗಾಗಲೇ ಗುಂಟೂರು ಕ್ಷೇತ್ರದಲ್ಲಿ ವ್ಯಾಪಕ ಪ್ರವಾಸ ಮಾಡುತ್ತಿದ್ದಾರೆ. ಅಂಬಟಿ ರಾಯುಡು ಹಿಂದಿನಿಂದಲೂ ವೈಎಸ್ಆರ್ ಕಾಂಗ್ರೆಸ್ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಿಎಂ ಜಗನ್ ತಂದ ಬದಲಾವಣೆಗಳಿಂದ ಪ್ರಭಾವಿತರಾದ ರಾಯುಡು ರಾಜಕೀಯಕ್ಕೆ ಬರುವುದಾಗಿ ಈ ಹಿಂದೆ ಘೋಷಿಸಿದ್ದರು. ಇದಕ್ಕೂ ಮುನ್ನ ಮಾತನಾಡಿದ ಅಂಬಟಿ ರಾಯುಡು, ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ಬಡ ಮಕ್ಕಳನ್ನು ಬೆಳೆಸಲು ಸಿಎಂ ಜಗನ್ ಶ್ರಮಿಸುತ್ತಿದ್ದಾರೆ ಎಂದು ರಾಯುಡು ಹೇಳಿದ್ದಾರೆ ಎಂದು 10Tv ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News