ರೈಲು ಸೀಟಿನ ವಿಚಾರದಲ್ಲಿ ಜಗಳ; ವ್ಯಕ್ತಿಗೆ ಥಳಿಸಿ ಹತ್ಯೆ

Update: 2023-09-23 03:24 GMT

ಸಾಂದರ್ಭಿಕ ಚಿತ್ರ (Photo:  en.wikipedia.org)

ಜೈಪುರ: ಇಲ್ಲಿನ ಜಗತ್ಪುರ ರೈಲು ನಿಲ್ದಾಣದಲ್ಲಿ ಕ್ಷುಲ್ಲಕ ಕಾರಣಕ್ಕೆ 50 ವರ್ಷದ ವ್ಯಕ್ತಿಯೊಬ್ಬರನ್ನು ಥಳಿಸಿ ಹತ್ಯೆ ಮಾಡಿದ ಪ್ರಕರಣ ವರದಿಯಾಗಿದೆ.

ರೈಲು ಸೀಟಿನ ವಿಚಾರದಲ್ಲಿ ಉಂಟಾದ ಜಗಳದಲ್ಲಿ ಬಸ್ಸಿ ಮೂಲದ ಚಂದ್ರೇಶ್ ಮೀನಾ ಎಂಬವರ ಮೇಲೆ ಗುಂಪು ಹಲ್ಲೆ ನಡೆಸಿತು. ರೈಲು ನಿಲ್ದಾಣದಲ್ಲಿ ರೈಲಿನಿಂದ ಇಳಿಯುವ ಸಂದರ್ಭದಲ್ಲಿ ಚಂದ್ರೇಶ್ ಮೇಲೆ ಜಿತೇಂದ್ರ ಮೀನಾ ಮತ್ತು ಆತನ ಸಹಚರರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ತಕ್ಷಣ ಚಂದ್ರೇಶ್ ಗೆ ವೈದ್ಯಕೀಯ ನೆರವು ನೀಡುವ ಪ್ರಯತ್ನದಲ್ಲಿ ಅವರನ್ನು ಜೈಪುರಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮೃತಪಟ್ಟಿರುವುದನ್ನು ಆಸ್ಪತ್ರೆಯಲ್ಲಿ ವೈದ್ಯರು ಘೋಷಿಸಿದರು. ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ವಿವರ ನೀಡಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಜಿತೇಂದ್ರ ಮೀನಾ ಹಾಗೂ ಆತನ ಸಹಚರರ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಬಂಧನಕ್ಕಾಗಿ ರೈಲು ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಯ ಪರಿಶೀಲನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Safwan

contributor

Byline - ವಾರ್ತಾಭಾರತಿ

contributor

Similar News