ಹರ್ಯಾಣದಲ್ಲಿ ಕಾಂಗ್ರೆಸ್ ಸರಕಾರ ರಚಿಸುವ ಕುರಿತು ಭರವಸೆ ವ್ಯಕ್ತಪಡಿಸಿದ ಭೂಪಿಂದರ್ ಸಿಂಗ್ ಹೂಡಾ
Update: 2024-10-08 07:09 GMT
ರೋಹ್ಟಕ್: ಹರ್ಯಾಣದಲ್ಲಿ ಸತತ ಮೂರನೆಯ ಬಾರಿಗೆ ಬಿಜೆಪಿ ಸರಕಾರ ರಚಿಸುವ ಸಾಧ್ಯತೆ ಇದೆ ಎಂದು ಆರಂಭಿಕ ಮುನ್ನಡೆಗಳು ತೋರಿಸುತ್ತಿದ್ದರೂ, ತಮ್ಮ ಪಕ್ಷವು ಹರ್ಯಾಣದಲ್ಲಿ ಬಹುಮತ ಗಳಿಸಿ, ಸರಕಾರ ರಚಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಭರವಸೆ ವ್ಯಕ್ತಪಡಿಸಿದ್ದಾರೆ.
ರೋಹ್ಟಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷವು ಸ್ವಂತ ಬಹುಮತದ ಮೇಲೆ ಸರಕಾರ ರಚಿಸಲಿದೆ” ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಪಕ್ಷದ ಪ್ರಚಾರದಲ್ಲಿ ಪಾಲ್ಗೊಂಡಿದ್ದ ನಾಯಕರನ್ನು ಶ್ಲಾಘಿಸಿದ ಅವರು, “ಇದರ ಶ್ರೇಯಸ್ಸು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಇನ್ನಿತರ ನಾಯಕರಿಗೆ ಸಲ್ಲುತ್ತದೆ” ಎಂದು ಹೇಳಿದ್ದಾರೆ.
ಹರ್ಯಾಣದಲ್ಲಿ ಮತ ಎಣಿಕೆ ಮುಂದುವರಿದಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ಬಗ್ಗೆ ಹೂಡಾ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.