ಬಿಹಾರ ಪ್ರವಾಹ ಪರಿಹಾರ ಕಾರ್ಯಾಚರಣೆ | ನೀರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಐಎಎಫ್ ಹೆಲಿಕಾಪ್ಟರ್

Update: 2024-10-02 13:54 GMT

PC : PTI 

ಪಾಟ್ನಾ : ಬಿಹಾರದಲ್ಲಿನ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ತೆರಳಿದ್ದ ಭಾರತೀಯ ವಾಯು ಪಡೆಯ ಸುಧಾರಿತ ಲಘು ಹೆಲಿಕಾಪ್ಟರ್ ಒಂದು ನೀರಿನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಬುಧವಾರ ಸೀತಾಮಾರ್ಹಿಯಲ್ಲಿ ನಡೆದಿದೆ. ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪೈಲಟ್ ಗಳು ಸೇರಿದಂತೆ ಎಲ್ಲ ನಾಲ್ವರು ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಹಾರ ಸಾಮಗ್ರಿಗಳನ್ನು ಏರ್ ಡ್ರಾಪ್ ಮಾಡಿದ ನಂತರ, ಹೆಲಿಕಾಪ್ಟರ್ ದರ್ಭಾಂಗದಿಂದ ಮರಳುತ್ತಿತ್ತು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಕುಮಾರ್ ಹೇಳಿದ್ದಾರೆ.

“ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ನಾಲ್ವರು ಪ್ರಯಾಣಿಕರು ಸುರಕ್ಷಿತವಾಗಿದ್ದು, ಅವರಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಮುಂಜಾಗ್ರತಾ ಕ್ರಮವಾಗಿ ತಪಾಸಣೆ ಮತ್ತು ಚಿಕಿತ್ಸೆಗಾಗಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು” ಎಂದು ಜಿಲ್ಲಾಧಿಕಾರಿ ಸುಬ್ರತ್ ಕುಮಾರ್ ಸೇನ್ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News