ಬಿಲ್ಕಿಸ್‌ ಬಾನು ಪ್ರಕರಣ: ರವಿವಾರದೊಳಗೆ ಶರಣಾಗಿ; ಎಲ್ಲಾ 11 ಅಪರಾಧಿಗಳಿಗೆ ಸುಪ್ರೀಂ ಆದೇಶ

Update: 2024-01-19 08:35 GMT

ಬಿಲ್ಕಿಸ್‌ ಬಾನು ಪ್ರಕರಣದ ಅಪರಾಧಿಗಳು (PTI)

ಹೊಸದಿಲ್ಲಿ: ಶರಣಾಗತಿಗೆ ಸಮಯಾವಕಾಶ ಕೋರಿ ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇಂದು ವಜಾಗೊಳಿಸಿದೆ. ರವಿವಾರದೊಳಗೆ ಎಲ್ಲಾ 11 ಮಂದಿ ಅಪರಾಧಿಗಳು ಶರಣಾಗಬೇಕು ಎಂದು ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ನೇತೃತ್ವದ ಪೀಠ ಇಂದು ಆದೇಶಿಸಿದೆ.

ಸುಪ್ರೀಂ ಕೋರ್ಟ್‌ ತನ್ನ ಇತ್ತೀಚಿಗಿನ ತೀರ್ಪಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಈ 11 ಮಂದಿ ಅಪರಾಧಿಗಳನ್ನು ಬಿಡುಗಡೆಗೊಳಿಸಿ ಗುಜರಾತ್‌ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿ ಅಪರಾಧಿಗಳಿಗೆ ಎರಡು ವಾರಗಳೊಳಗೆ ಶರಣಾಗುವಂತೆ ಸೂಚಿಸಿತ್ತಲ್ಲದೆ ಇಂತಹ ಆದೇಶ ಹೊರಡಿಸಲು ಗುಜರಾತ್‌ ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಹೇಳಿತ್ತು.

ಇತ್ತೀಚೆಗೆ ಅಪರಾಧಿಗಳು ವಿವಿಧ ಕಾರಣಗಳನ್ನು ಮುಂದೊಡ್ಡಿ ತಮಗೆ ಶರಣಾಗಲು ಸಮಯಾವಕಾಶ ನೀಡಬೇಕೆಂದು ಕೋರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News