ಸದನದಲ್ಲಿ ಉಪಸ್ಥಿತರಿರುವಂತೆ ಸಂಸದರಿಗೆ ಬಿಜೆಪಿ, ಕಾಂಗ್ರೆಸ್ ಸಚೇತಾಕಾಜ್ಞೆ

Update: 2025-04-01 22:30 IST
ಸದನದಲ್ಲಿ ಉಪಸ್ಥಿತರಿರುವಂತೆ ಸಂಸದರಿಗೆ ಬಿಜೆಪಿ, ಕಾಂಗ್ರೆಸ್ ಸಚೇತಾಕಾಜ್ಞೆ

ಲೋಕಸಭೆ | PC : PTI 

  • whatsapp icon

ಹೊಸದಿಲ್ಲಿ : ಲೋಕಸಭೆಯಲ್ಲಿ ಬುಧವಾರ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯಾಗಲಿರುವುದರಿಂದ ಕಲಾಪದ ವೇಳೆ ತನ್ನ ಎಲ್ಲಾ ಸಂಸದರು ಸದನದಲ್ಲಿ ಹಾಜರಿರಬೇಕೆಂದು ಬಿಜೆಪಿಯು ಮಂಗಳವಾರ ಸಚೇತಕಾಜ್ಞೆಯನ್ನು ಜಾರಿಗೊಳಿಸಿದೆ.

ಕಾಂಗ್ರೆಸ್ ಪಕ್ಷವು ಕೂಡಾ ಸಂಸತ್ ಅಧಿವೇಶನದ ಮುಂದಿನ ಮೂರು ದಿನಗಳವರೆಗೆ ತನ್ನ ಎಲ್ಲಾ ಸಂಸದರು ಸದನದಲ್ಲಿ ಉಪಸ್ಥಿತರಿರಬೇಕೆಂದು ಸಚೇತಾಕಾಜ್ಞೆ ಹೊರಡಿಸಿದೆ.

ಈ ಹಿಂದೆ ವಿಧೇಯಕಕ್ಕೆ ಸಂಬಂಧಿಸಿ ಎನ್‌ಡಿಎ ಮೈತ್ರಿಕೂಟದ ಪಕ್ಷಗಳು ಮಂಡಿಸಿದ್ದ ಸಲಹೆಗಳನ್ನು ಜಂಟಿ ಸಂಸದೀಯ ಸಮಿತಿಯು ಅನುಮೋದಿಸಿತ್ತು. ಬುಧವಾರ ಮಂಡನೆಯಾಗಲಿರುವ ಮಸೂದೆಯಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News