ಸಂಸತ್ತಿನ ಒಳಗೆ ಹೋಗದಂತೆ ಬಿಜೆಪಿ ಸಂಸದರು ನನ್ನನ್ನು ತಳ್ಳಿದರು: ರಾಹುಲ್ ಗಾಂಧಿ

Update: 2024-12-19 07:29 GMT

Photo credit: PTI

ಹೊಸದಿಲ್ಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಬಿಜೆಪಿ ಸಂಸದರು ತಮ್ಮನ್ನು ಮತ್ತು ಇತರ ವಿರೋಧ ಪಕ್ಷದ ಸಂಸದರನ್ನು ಸಂಸತ್ತಿಗೆ ಪ್ರವೇಶಿಸದಂತೆ ತಳ್ಳಿದರು ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿಯವರು ತಳ್ಳಿದ್ದರಿಂದ ಬಿಜೆಪಿ ಸಂಸದ ಪ್ರತಾಪ್ ಸಾರಂಗಿಯವರಿಗೆ ಗಾಯವಾಗಿದೆ ಎಂದು ಆರೋಪ ಬಂದ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

ಸಂಸತ್ತಿನ ಮಕರ ದ್ವಾರದ ಮುಂದೆ ಪ್ರತಿಭಟನಾನಿರತ ಇಂಡಿಯಾ ಮೈತ್ರಿ ಕೂಟ ಮತ್ತು ಬಿಜೆಪಿ ಸಂಸದರು ಮುಖಾಮುಖಿಯಾದಾಗ ನೂಕಾಟ ತಳ್ಳಾಟ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಗಗಾಯಗೊಂಡ ಸಂಸದ ಸಾರಂಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

"ನಾನು ಸಂಸತ್ತಿಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದೆ. ಬಿಜೆಪಿ ಸಂಸದರು ನನ್ನನ್ನು ತಡೆದು, ತಳ್ಳಿದರು. ನನಗೆ ಬೆದರಿಕೆಯನ್ನು ಹಾಕಿದ್ದಾರೆ" ಎಂದು ರಾಹುಲ್ ಗಾಂಧಿ ಸಂಸತ್ತಿನ ಆವರಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News