ಛತ್ತೀಸ್‌ಗಢ : ಮಾವೋವಾದಿಗಳಿಂದ ಬಿಜೆಪಿ ನಾಯಕನ ಹತ್ಯೆ

Update: 2023-11-04 16:00 GMT

Photo: NDTV

ರಾಯ್ಪುರ: ಛತ್ತೀಸ್‌ಗಢ ವಿಧಾನಸಭೆಗೆ ನಡೆಯುತ್ತಿರುವ ಮೊದಲ ಹಂತದ ಚುನಾವಣೆಗೆ ಇನ್ನು ಮೂರು ದಿನ ಬಾಕಿ ಇರುವಾಗ, ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಬಿಜೆಪಿ ನಾಯಕರೋರ್ವರನ್ನು ಮಾವೋವಾದಿಗಳು ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾಗಿರುವ ರತನ್ ದುಬೆ ನಾರಾಯಣಪುರ ಜಿಲ್ಲಾ ಘಟಕದ ಬಿಜೆಪಿ ಉಪಾಧ್ತಕ್ಷರಾಗಿದ್ದರು ಎಂದು ndtv.com ವರದಿ ಮಾಡಿದೆ.

ಈ ಘಟನೆಯು ನಾರಾಯಣಪುರ ಜಿಲ್ಲೆಯ ಕೌಶಲ್ನರ್ ಪ್ರದೇಶದಲ್ಲಿ ಶನಿವಾರ ನಡೆದಿದೆ. ಈ ಪ್ರದೇಶವನ್ನು ರತನ್ ದುಬೆ ಜಿಲ್ಲಾ ಪಂಚಾಯತಿಯಲ್ಲಿ ಪ್ರತಿನಿಧಿಸಿದ್ದರು.

ದುಬೆ ಅವರು ಕೌಶಲ್ನರ್ ಮಾರುಕಟ್ಟೆ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಮಾಡಲು ತೆರಳಿದ್ದಾಗ ಅವರನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚುನಾವಣೆಯಲ್ಲಿ ಭಾಗವಹಿಸುವವರ ವಿರುದ್ಧ ಇತ್ತೀಚಿಗೆ ಮಾವೋವಾದಿಗಳು ಎಚ್ಚರಿಕೆಯ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದರು.

ಹತ್ಯೆಯ ಕುರಿತು ತನಿಖೆ ನಡೆಸಲು ತಂಡವೊಂದು ಸ್ಥಳಕ್ಕೆ ಧಾವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಛತ್ತೀಸ್‌ಗಢ ರಾಜ್ಯ ವಿಧಾನಸಭಾ ಚುನಾವಣೆಯು ನವೆಂಬರ್ 7 ಹಾಗೂ ನವೆಂಬರ್ 17ರಂದು ಎರಡು ಹಂತಗಳಲ್ಲಿ ನಡೆಯಲಿದೆ. ನವೆಂಬರ್ 7ರಂದು ಮತದಾನ ನಡೆಯಲಿರುವ 20 ವಿಧಾನಸಭಾ ಕ್ಷೇತ್ರಗಳ ಪೈಕಿ ನಾರಾಯಣಪುರ ಕೂಡಾ ಒಂದಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News